Wednesday, April 24, 2013

ಚಂದ್ರಚೂಡ ಶಿವ ಶಂಕರ ಪಾರ್ವತಿ

ಚಂದ್ರಚೂಡ ಶಿವ ಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ//ಪ//

ಸುಂದರ ಮೃಗದರ ಪಿನಾಕಧರಹರ ಗಂಗಾಧರ ಶಿರ ಗಜ ಚರ್ಮಾಂಬರಧರ//ಅಪ//


ನಂದಿ ವಾಹನಾನಂದಿಂದ ಮೂರ್ಜಗದಿ ಮೆರೆವನು ನೀನೆ

ಅಂದು ಅಮೃತ ಘಟದಿಂದುದಿಸಿದ ವಿಷ ತಂದು ಭುಜಿಸಿದವನು ನೀನೆ

ಕಂದರ್ಪನ ಕ್ರೋಧದಿಂದ ಕಣ್ತೆರದು ಕೊಂದ ಉಗ್ರನು ನೀನೆ

ಇಂದಿರೇಶ ಶ್ರೀ ರಾಮನ ಪಾದವ ಚಂದದಿ ಪೊಗಳುವನು ನೀನೆ//


ಬಾಲ ಮೃಕಂಡನ ಕಾಲನು ಎಳೆವಾಗ ಪಲಿಸಿದವನು ನೀನೆ

ಕಾಲಕೂಟ ವಿಷವ ಪಾನ ಮಾಡಿದ ನೀಲಕಂಠ ನೀನೆ

ವಾಲಯದಿ ಕಪಾಲವ ಪಿಡಿದು ಭಿಕ್ಷೆ ಬೇಡೋ ದಿಗಂಬರನು ನೀನೆ

ಜಾಲ ಮಾಡುವ ಗೋಪಾಲನೆಂಬ ಪೆಣ್ಣಿಗೆ ಮರುಳಾದವನು ನೀನೆ//


ಧರೆಗೆ ದಕ್ಷಿಣ ಕಾವೇರಿ ತೀರ ಕುಂಭಾಪುರ ನಿವಾಸನು ನೀನೆ

ಕರದಲಿ ವೀಣೆಯ ಗಾನವ ಮಾಡುವ ನಮ್ಮ ಉರಗ ಭೂಷಣನು

ಕೊರಳಲಿ ಭಸ್ಮ ರುದ್ರಾಕ್ಷಿ ಧರಿಸಿದ ಪರಮ ವೈಷ್ಣವನು ನೀನೆ

ಗರುಡ ಗಮನ ಶ್ರೀ ಪುರಂದರ ವಿಠಲಗೆ ಪ್ರಾಣ ಪ್ರಿಯನು ನೀನೆ//



No comments:

Post a Comment