Thursday, May 2, 2013

ಕ್ಷೀರಾಬ್ಧಿ ಕನ್ನಿಕೆ


ಕ್ಷೀರಾಬ್ಧಿ ಕನ್ನಿಕೆ ಶ್ರೀಮಹಾಲಕ್ಷ್ಮಿ ಯಾರಿಗೆ ವಧುವಾಗುವೆ ನೀನು ||

ಶರಧಿ ಬಂಧನ ರಾಮಚಂದ್ರ ಮೂರ್ತಿಗೋ
ಪರಮಾತ್ಮ ಅನಂತ ಪದ್ಮನಾಭಗೋ
ಸರಸಿಜನಾಭ ಶ್ರೀ ಜನಾರ್ಧನ ಮೂರ್ತಿಗೋ
ಉಭಯಕಾವೇರಿ ರಂಗ ಪಟ್ಟಣದರಸಗೋ ||

ಚೆಲುವ ಮೂರುತಿ ಬೇಲೂರ ಚೆನ್ನಿಗರಾಯನಿಗೋ
ಗೆಳತಿ ಹೇಳು ಉಡುಪಿ ಶ್ರೀ ಕೃಷ್ಣರಾಯನಿಗೋ
ಇಳೆಯೊಳು ಪಾಂಡುರಂಗ ವಿಠಲ ರಾಯಗೋ
ನಳಿನಾಕ್ಷಿ ಹೇಳಮ್ಮ ಬದರಿ ನಾರಾಯಣಗೋ ||

ಮಲಯಜ ಗಂಧೀ ಬಿಂದು ಮಾಧವರಾಯಗೋ
ಸುಲಭ ದೇವರು ಪುರುಷೋತ್ತಮಗೋ
ಫಲದಾಯಕ ನಿತ್ಯ ಮಂಗಳದಾಯಕಗೋ
ಚೆಲುವೆ ನಾಚದೆ ಪೇಳು ಶ್ರೀವೆಂಕಟೇಶಗೋ ||

ವಾಸವಾರ್ಚಿತ ಕಂಚಿ ವರದರಾಜನಿಗೋ
ಶ್ರೀಮುಷ್ಣದಲ್ಲಿ ಆದೀವರಾಯನಿಗೋ
ಶೇಷಶಾಯಿಯಾದ ಶ್ರೀಮನ್ ನಾರಾಯಣಗೋ
ಸಾಸಿರ ನಾಮದೊಡೆಯ ಅಳಗಿರಿಶಗೋ ||
 
ಶರಣಾಗತ ರಕ್ಷಕ ಸಾರಂಗ ಪಾಣಿಗೋ
ವರಗಳ ನೀಡುವ ಶ್ರೀನಿವಾಸಗೋ
ಕುರುಕುಲಾಂತಕ ರಾಜಗೋಪಾಲ ಮೂರ್ತಿಗೋ
ಸ್ಥಿರವಾಗಿ ಪುರಂದರ ವಿಠಲರಾಯನಿಗೋ||

No comments:

Post a Comment