Monday, May 20, 2013

ಎಲ್ಲಿರುವನೋ ರಂಗ


ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ
ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು||

ತರಳ ಪ್ರಹ್ಲಾದ ಹರಿ ವಿಶ್ವಮಯನೆಂದು
ಭರದೊದೆಯಲವನಪಿತ ಕೋಪದಿಂದ
ಸ್ಥಿರವಾದೊಳಿ ಕಂಭದಲಿ ತೋರು ತೋರೆನಲು
ಭರದಿಂದ ಬರಲದಕೆ ವೈಕುಂಠ ನೆರೆಮನೆಯೇ ||

ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆ
ತರುಣಿ ಹಾ ಕೃಷ್ಣ ಎಂದರೆ ಕೇಳ್ದು
ಭರದಿಂದ ಅಕ್ಷಯಾಂಬರವೀಯೆ ಹಸ್ತಿನಾ
ಪುರಿಗೆ ದ್ವಾರಾವತಿಯು ಕೂಗಳತೆಯೇ||

ಅಣುಹೊತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯ
ಗಣನೆಯಿಲ್ಲದ ಮಹಾಮಹಿಮನೆನಿಪ
ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನು
ನೆನೆವರ ಮನದೊಳಿಹನೆಂಬ ಬಿರುದುಂಟಾಗಿ||

No comments:

Post a Comment