Tuesday, March 11, 2014

ಈಸಬೇಕು ಇದ್ದು ಜೈಸಬೇಕು

ಈಸಬೇಕು ಇದ್ದು ಜೈಸಬೇಕು
ಹೇಸಿಗೆ ಸಂಸಾರದಲ್ಲಿ ಆಸೆ ಲೇಶ ಇಡದ್ಹಾ೦ಗೆ
ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳು
ಸ್ವಾಮಿ ರಾಮನೆನುತ ಪಾಡಿ ।।೧।।

ಕಾಮಿತ ಕೈಗೊಂಬರೆಲ್ಲ
ಗೇರುಹಣ್ಣಿನಲ್ಲಿ ಬೀಜ ಸೇರಿದಂತೆ ಸಂಸಾರದಿ
ಮೀರಿಯಾಸೆ ಮಾಡದಲೆ
ಧೀರ ಕೃಷ್ಣನ ಭಕುತರೆಲ್ಲ ।।೨।।

ಮಾಂಸದಾಸೆಗೆ ಮತ್ಸ್ಯ ಸಿಲುಕಿ
ಹಿಂಸೆ ಪಡುವ ಪರಿಯೊಳು
ಮೋಸ ಹೋಗದ್ಹಾ೦ಗೆ
ಜಗದೀಶ ಪುರಂದರವಿಠಲನ ನೆನೆದು ।।೩।।

No comments:

Post a Comment