//ಶ್ರೀ ಗುರುಭ್ಯೋ ನಮಃ//
//ಪರಮ ಗುರುಭ್ಯೋ ನಮಃ//
//ಶ್ರೀ ಜಗನ್ನಾಥದಾಸ ಗುರುಭ್ಯೋ ನಮಃ//
ಶ್ರೀ ಜಗನ್ನಾಥದಾಸ ವಿರಚಿತ 
ಶ್ರೀ ಹರಿಕಥಾಮೃತಸಾರ 
//ಭೋಜನ ಸಂಧಿ//
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ/
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು//
ವನಜಾಂಡದೊಳು ಉಳ್ಳ ಅಖಿಳ ಚೇತನರು ಭುಂಜಿಪ 
ಚತುರವಿಧ ಭೋಜನಪದಾರ್ಥದಿ ಚತುರವಿಧ ರಸರೂಪ ತಾನಾಗಿ 
ಮನಕೆ ಬಂದಂತೆ ಉಂಡು ಉಣಿಸಿ ಸಂಹನನಕೆ ಉಪಚಯ 
ಕರುಣಕೆ ಆನಂದ ಅನಿಮಿಷರಿಗೆ ಆತ್ಮ ಪ್ರದರ್ಶನ ಸುಖವನೀವ ಹರಿ//1//
ನೀಡದಂದದಲೆ ಇಪ್ಪ ಲಿಂಗಕೆ ಷೋಡಶ ಆತ್ಮಕ ರಸ ವಿಭಾಗವ ಮಾಡಿ 
ಷೋಡಶ ಕಲೆಗಳಿಗೆ ಉಪಚಯಗಳನೆ ಕೊಡುತ 
ಕ್ರೋಡ ಎಪ್ಪತ್ತೆರಡು ಸಾವಿರ ನಾಡಿಗತ ದೇವತೆಗಳೊಳಗೆ ಇದ್ದಾಡುತ ಆನಂದಾತ್ಮ 
ಚರಿಸುವ ಲೋಕದೊಳು ತಾನು//2//
ವಾರಿವಾಚ್ಯನು ವಾರಿಯೊಳಗಿದ್ದು ಆರು ರಸವೆಂದೆನಿಸಿ 
ಮೂವತ್ತಾರು ಸಾವಿರ ಸ್ತ್ರೀ ಪುರುಷನಾಡಿಯಲಿ ತದ್ರೂಪ ಧಾರಕನು ತಾನಾಗಿ 
ಸರ್ವ ಶರೀರಗಳಲಿ ಅಹಶ್ಚರಾತ್ರಿ ವಿಹಾರ ಮಾಳ್ಪನು 
ಬೃಹತಿಯೆಂಬ ಸುನಾಮದಿಂ ಕರೆಸಿ//3//
ಆರುರಸ ಸತ್ವಾದಿ ಭೇದದಿ ಆರು ಮೂರಾಗಿ ಇಹವು 
ಸಾರಾಸಾರನೀತ ಪ್ರಚುರ ಖಂಡಾಖಂಡ ಚಿತ್ಪ್ರಚುರ 
ಈರು ಅಧಿಕ ಎಪ್ಪತ್ತು ಸಾವಿರ ಮಾರಮಣನ ರಸಾಖ್ಯರೂಪ 
ಶರೀರದೊಳು ಭೋಜ್ಯ ಸುಪದಾರ್ಥದಿ ತಿಳಿದು ಭುಂಜಿಪುದು//4//
ಕ್ಷೀರಗತ ರಸ ರೂಪಗಳು ಮುನ್ನೂರು ಮೇಲೆ ಐವತ್ತು ನಾಲ್ಕು 
ಚಾರು ಘೃತಗತ ರೂಪಗಳು ಇಪ್ಪತ್ತರ ಒಂಭತ್ತು 
ಸಾರ ಗುಡದೊಳಗೆ ಐದು ಸಾವಿರ ನೂರಾವೊಂದು 
ಸುರೂಪ ದ್ವಿಸಹಸ್ರ ಆರೆರಡು ಶತ ಪಂಚ ವಿಂಶತಿ ರೂಪ ಫಲಗಳಲಿ//5//
ವಿಶದ ಸ್ಥಿರತೀಕ್ಷಣವು ನಿರ್ಹರ ರಸಗಳೊಳು 
ಮೂರೈದುಸಾವಿರ ತ್ರಿಶತ ನವರೂಪಗಳ ಚಿಂತಿಸಿ ಭುಂಜಿಪುದು ವಿಷಯ 
ಶ್ವಸನ ತತ್ತ್ವೇಶರೊಳಗಿದ್ದು ಈ ಪೆಸರಿನಿಂದಲಿ ಕರೆಸುವನು 
ಧೇನಿಸಿದರೀ ಪರಿ ಮನಕೆ ಪೊಳೆವನು ಬಲ್ಲ ವಿಬುಧರಿಗೆ//6//
ಕಪಿಲ ನರಹರಿ ಭಾರ್ಗವತ್ರಯ ವಪುಷ ನೇತ್ರದಿ ನಾಸಿಕಾಸ್ಯದಿ 
ಶಫರನಾಮಕ ಜಿಹ್ವೆಯಲಿ ದಂತದಲಿ ಹಂಸಾಖ್ಯ 
ತ್ರಿಪದಿಪಾದ್ಯ ಹಯಾಸ್ಯ ವಾಚ್ಯದೊಳು ಅಪರಿಮಿತ ಸುಖಪೂರ್ಣ ಸಂತತ ಕೃಪಣರೊಳಗಿದ್ದು 
ಅವರವರ ರಸ ಸ್ವೀಕರಿಸಿ ಕೊಡುವ//7//
ನಿರುಪಮಾನಂದಾತ್ಮ ಹರಿ ಸಂಕರುಷಣ ಪ್ರದ್ಯುಮ್ನರೂಪದಿ ಇರುತಿಹನು ಭೋಕ್ತ್ರುಗಳೊಳಗೆ 
ತತ್ಶಕ್ತಿದನುಯೆನಿಸಿ ಕರೆಸುವನು 
ನಾರಾಯಣ ಅನಿರುದ್ಧ ಎರಡುನಾಮದಿ ಭೋಜ್ಯವಸ್ತುಗನಿರುತ 
ತರ್ಪಕನಾಗಿ ತೃಪ್ತಿಯನೀವ ಚೇತನಕೆ//8//
ವಾಸುದೇವನು ಒಳ ಹೊರಗೆ ಅವಕಾಶ ಕೊಡುವ ನಭಸ್ಥನಾಗಿ 
ರಮಾಸಮೇತ ವಿಹಾರ ಮಾಳ್ಪನು ಪಂಚರೂಪದಲಿ 
ಆ ಸರೋರುಹ ಸಂಭವಭವವಾಸವಾದಿ ಅಮರಾದಿ ಚೇತನ ರಾಶಿಯೊಳಗೆ 
ಇಹನು ಎಂದರಿತವನು ಅವನೇ ಕೋವಿದನು//9//
ವಾಸುದೇವನು ಅನ್ನದೊಳು ನಾನಾ ಸುಭಕ್ಷ್ಯದಿ ಸಂಕರುಷಣ 
ಕೃತೀಶ ಪರಮಾನ್ನದೊಳು ಘೃತದೊಳಗೆ ಇಪ್ಪ ಅನಿರುದ್ಧ 
ಆ ಸುಪರ್ಣ ಅಂಸಗನು ಸೂಪದಿ ವಾಸವ ಅನುಜ ಶಾಕದೊಳು 
ಮೂಲೇಶ ನಾರಾಯಣನು ಸರ್ವತ್ರದಲಿ ನೆಲೆಸಿಹನು//10//
ಅಗಣಿತ ಆತ್ಮ ಸುಭೋಜನ ಪದಾರ್ಥಗಳ ಒಳಗೆ 
ಅಖಂಡ ವಾದ ಒಂದು ಅಗಳಿನೊಳು ಅನಂತ ಅಂಶದಲಿ ಖಂಡನೆಂದೆನಿಸಿ 
ಜಗದಿ ಜೀವರ ತೃಪ್ತಿ ಪಡಿಸುವ ಸ್ವಗತ ಭೇದ ವಿವರ್ಜಿತನ 
ಈರ್ಬಗೆಯ ರೂಪವನರಿತು ಭುಂಜಿಸಿ ಅರ್ಪಿಸು ಅವನಡಿಗೆ//11//
ಈ ಪರಿಯಲಿ ಅರಿತು ಉಂಬ ನರ ನಿತ್ಯ ಉಪವಾಸಿ ನಿರಾಮಯನು ನಿಷ್ಪಾಪಿ 
ನಿತ್ಯ ಮಹಾ ಸುಯಜ್ಞಗಳು ಆಚರಿಸಿದವನು 
ಪೋಪದು ಇಪ್ಪದು ಬಪ್ಪುದು ಎಲ್ಲ ರಮಾಪತಿಗೆ ಅಧಿಷ್ಠಾನವೆನ್ನು 
ಕೃಪಾಪಯೋನಿಧಿ ಮಾತಲಾಲಿಸುವನು ಜನನಿಯಂತೆ//12//
ಆರೆರೆಡು ಸಾವಿರದ ಮೇಲೆ ಇನ್ನೂರ ಐವತ್ತೊಂದು ರೂಪದಿ 
ಸಾರಭೋಕ್ತ ಅನಿರುದ್ಧ ದೇವನು ಅನ್ನಮಯನೆನಿಪ 
ಮೂರೆರೆಡುವರೆ ಸಾವಿರದ ಮೇಲೆ ಮೂರಧಿಕ ನಾಲ್ವತ್ತು ರೂಪದಿ 
ತೋರುತಿಹ ಪ್ರದ್ಯುಮ್ನ ಜಗದೊಳು ಪ್ರಾಣಮಯನಾಗಿ//13//
ಎರಡು ಕೋಶಗಳ ಒಳ ಹೊರಗೆ ಸಂಕರುಷಣ ಇದು ಸುಲಕ್ಷದ ಅರವತ್ತೆರೆಡು ಸಾವಿರದ 
ಏಳಧಿಕ ಶತ ರೂಪಗಳ ಧರಿಸಿ ಕರೆಸಿಕೊಂಬ ಮನೋಮಯ ಎಂದು 
ಅರವಿದೂರನು ಈರೆರೆಡು ಸಾವಿರದ ಮುನ್ನೂರು 
ಅದ ಮೇಲೆ ನಾಲ್ಕಧಿಕ ಎಪ್ಪತ್ತು//14//
 ಹದಿನಾಲ್ಕು ಮತ್ತು ಹದಿನೈದನೆ ಪದ್ಯವನ್ನು ಒಟ್ಟಿಗೆ ಓದುವುದು.
ರೂಪದಿಂ ವಿಜ್ಞಾನಮಯನು ಎಂಬೀ ಪೆಸರಿನಿಂ ವಾಸುದೇವನು 
ವ್ಯಾಪಿಸಿಹ ಮಹದಾದಿ ತತ್ತ್ವದಿ ತತ್ಪತಿಗಳೊಳಗೆ 
ಈ ಪುರುಷ ನಾಮಕನ ಶುಭ ಸ್ವೇದಾಪಳು ಎನಿಸಿದ ರಮಾಂಬ 
ತಾ ಬ್ರಹ್ಮಾಪರೋಕ್ಷಿಗಳು ಆದವರ ಲಿಂಗಾಂಗ ಕೆಡಿಸುವಳು//15// 
ಐದು ಸಾವಿರ ನೂರಿಪ್ಪತ್ತೈದು ನಾರಾಯಣ ರೂಪವ ತಾ ಧರಿಸಿಕೊಂಡು
ಅನುದಿನದಿ ಆನಂದಮಯನೆನಿಪ 
ಐದು ಲಕ್ಷದ ಮೇಲೆ ಎಂಭತ್ತೈದುಸಾವಿರ ನಾಲ್ಕು ಶತಗಳ 
ಐದು ಕೋಶಾತ್ಮಕ ವಿರಿಂಚಾಡದೊಳು ತುಂಬಿಹನು//16// 
ನೂರಾವೊಂದು ಸುರೂಪದಿಂ ಶಾಂತೀರಮಣ ತಾನು ಅನ್ನನೆನಿಪ 
ಐನೂರ ಮೇಲೆ ಮೂರಧಿಕ ದಶ ಪ್ರಾಣಾಖ್ಯ ಪ್ರದ್ಯುಮ್ನ 
ತೋರುತಿಹನು ಐವತ್ತೈದುಸಾವಿರ ವಿಕಾರ ಮನದೊಳು ಸಂಕರುಷಣ 
ಐನೂರ ಚತುರಾಶೀತಿ ವಿಜ್ಞಾನಾತ್ಮ ವಿಶ್ವಾಖ್ಯ//17//
ಮೂರು ಸಾವಿರದ ಅರ್ಧಶತ ಮೇಲೆ ಈರು ಅಧಿಕ ರೂಪಗಳ ಧರಿಸಿ 
ಶರೀರದೊಳಗೆ ಆನಂದಮಯ ನಾಯಾಯಣಾಹ್ವಯನು 
ಈರೆರೆಡು ಸಾವಿರದ ಮೇಲೆ ಮುನ್ನೂರ ಐದು ಸುರೂಪದಿಂದಲಿ 
ಭಾರತೀಶನೊಳು ಇಪ್ಪ ನವನೀತಸ್ಥ ಘೃತದಂತೆ//18//
ಮೂರಧಿಕ ಐವತ್ತು ಪ್ರಾಣ ಶರೀರದೊಳಗೆ ಅನಿರುದ್ಧನು ಇಪ್ಪ 
ಐನೂರು ಹನ್ನೊಂದು ಅಧಿಕ ಅಪಾನನೊಳು ಇಪ್ಪ ಪ್ರದ್ಯುಮ್ನ 
ಮೂರನೇ ವ್ಯಾನನೊಳಗೆ ಐದರೆ ನೂರು ರೂಪದಿ ಸಂಕರುಷಣ 
ಐನೂರ ಮೂವತ್ತೈದು ಉದಾನನೊಳು ಇಪ್ಪ ಮಾಯೇಶ//19//
ಮೂಲ ನಾರಾಯಣನು ಐವತ್ತೇಳಧಿಕ ಐನೂರು ರೂಪವ ತಾಳಿ 
ಸರ್ವತ್ರದಿ ಸಮಾನನೊಳಿಪ್ಪ ಸರ್ವಜ್ಞ 
ಲೀಲೆಗೈವನು ಸಾವಿರದ ಮೇಲೆ ಏಳು ನೂರು ಹನ್ನೊಂದು ರೂಪವ ತಾಳಿ 
ಪಂಚಪ್ರಾಣರೊಳು ಲೋಕಗಳ ಸಲಹುವನು//20//
ತ್ರಿನವತಿ ಸುರೂಪಾತ್ಮಕ ಅನಿರುದ್ಧನು ಸದಾ ಯಜಮಾನನಾಗಿದ್ದು 
ಅನಲ ಯಮ ಸೋಮಾದಿ ಪಿತೃದೇವತೆಗಳಿಗೆ ಅನ್ನನು ಎನಿಪನು 
ಆ ಪ್ರದ್ಯುಮ್ನ ಸಂಕರುಷಣ ವಿಭಾಗವ ಮಾಡಿಕೊಟ್ಟು ಉಂಡುಣಿಪ 
ನಿತ್ಯಾನಂದ ಭೋಜನದಾಯಿ ತುರ್ಯಾಹ್ವ//21//
ಷಣ್ಣವತಿ ನಾಮಕನು ವಸು ಮೂಗಣ್ಣ ಭಾಸ್ಕರರ ಒಳಗೆ ನಿಂತು 
ಪ್ರಾಪನ್ನರು ಅನುದಿನ ನಿಷ್ಕಪಟ ಸದ್ಭಕ್ತಿಯಲಿ ಮಾಳ್ಪ ಪುಣ್ಯ ಕರ್ಮವ ಸ್ವೀಕರಿಸಿ 
ಕಾರುಣ್ಯ ಸಾಗರನು ಆ ಪಿತೃಗಳಿಗೆ 
ಅಗಣ್ಯ ಸುಖವಿತ್ತು ಅವರ ಪೊರೆವನು ಎಲ್ಲ ಕಾಲದಲಿ//22//
ಸುತಪ ಏಕ ಉತ್ತರ ಸುಪಂಚಾಶತ ವರಣ ಕರಣದಿ ಚತುರ ವಿಂಶತಿ ಸುತತ್ವದಿ 
ಧಾತುಗಳೊಳು ಇದ್ದು ಅವಿರತ ಅನಿರುದ್ಧ 
ಜತನ ಮಾಳ್ಪನು ಜಗದಿ ಜೀವ ಪ್ರತತಿಗಳ 
ಷಣ್ಣವತಿ ನಾಮಕ ಚತುರ ಮೂರ್ತಿಗಳ ಅರ್ಚಿಸುವರು ಅದರಿಂದ ಬಲ್ಲವರು//23//
ಅಬುಜಾಂಡ ಉದರನು ವಿಪಿನದಿ ಶಬರಿ ಯಂಜಲನುಂಡ ಗೋಕುಲದ ಅಬಲೆಯರನು 
ಓಲಿಸಿದನು ಋಷಿಪತ್ನಿಯರು ಕೊಟ್ಟನ್ನ ಸುಭುಜ ತಾ ಭುಂಜಿಸಿದ 
ಸ್ವರಮಣ ಕುಬುಜಗಂಧಕೊಲಿದ ಮುನಿಗಣ ವಿಬುಧ ಸೇವಿತ 
ಬಿಡುವನೆ ನಾವು ಇತ್ತ ಕರ್ಮಫಲ//24//
ಗಣನೆಯಿಲ್ಲದ ಪರಮಸುಖ ಸುದ್ಗುಣ ಗಣಂಗಳ ಲೇಶ ಲೇಶಕೆ ಎಣೆಯೆನಿಸದು 
ರಮಾಬ್ಜಭವ ಶಕ್ರಾದಿಗಳ ಸುಖವು 
ಉಣುತ ಉಣುತ ಮೈಮರೆದು ಕೃಷ್ಣಾರ್ಪಣವೆನಲು 
ಕೈಕೊಂಬನು ಅರ್ಭಕ ಜನನಿ ಭೋಜನ ಸಮಯದಲಿ ಕೈವಡ್ದು ವಂದದಲಿ//25//
ಜೀವಕೃತ ಕರ್ಮಗಳ ಬಿಡದೆ ರಮಾವರನು ಸ್ವೀಕರಿಸಿ 
ಫಲಗಳನು ಈವನು ಅಧಿಕಾರಾನುಸಾರದಲಿ ಅವರಿಗೆ ಅನವರತ 
ಪಾವಕನು ಸರ್ವಸ್ವ ಭುಂಜಿಸಿ ತಾ ವಿಕಾರವನು ಐದನು ಒಮ್ಮೆಗೆ 
ಪಾವನಕೆ ಪಾವನನೆನಿಪ ಹರಿಯುಂಬುದು ಎನರಿದು//26//
ಕಳುಷಜಿಹ್ವೆಗೆ ಸುಷ್ಟುಭೋಜನ ಜಲ ಮೊದಲು ವಿಷತೋರುವುದು 
ನಿಷ್ಕಲುಷ ಜಿಹ್ವೆಗೆ ಸುರಸ ತೋರುವುದು ಎಲ್ಲ ಕಾಲದಲಿ 
ಸುಲಲಿತಾಂಗಗೆ ಸಕಲ ರಸ ಮಂಗಳವೆನಿಸುತಿಹುದು 
ಅನ್ನಮಯ ಕೈಕೊಳದೆ ಬಿಡುವನೆ ಪೂತನಿಯ ವಿಷ ಮೊಲೆಯನು ಉಂಡವನು//27//
ಪೇಳಲಿ ಏನು ಸಮೀರ ದೇವನು ಕಾಳಕೂಟವನು ಉಂಡು ಲೋಕವ ಪಾಲಿಸಿದ 
ತದ್ದಾಸನು ಓರ್ವನು ಅಮೃತನೆನಿಸಿದನು 
ಶ್ರೀ ಲಕುಮಿವಲ್ಲಭ ಶುಭಾಶುಭ ಜಾಲ ಕರ್ಮಗಳ ಉಂಬನು 
ಉಪಚಯದ ಏಳಿಗೆಗಳು ಇವಗಿಲ್ಲವೆಂದಿಗು ಸ್ವರಸಗಳ ಬಿಟ್ಟು//28//
ಈ ಪರಿಯಲಿ ಅಚ್ಯುತನ ತತ್ತದ್ರೂಪ ತನ್ನಾಮಗಳ ಸಲೆ 
ನಾನಾ ಪದಾರ್ಥದಿ ನೆನೆನೆನೆದು ಭುಂಜಿಸುತಲಿ ಇರು ವಿಷಯ 
ಪ್ರಾಪಕ ಸ್ಥಾಪಕ ನಿಯಾಮಕ ವ್ಯಾಪಕನು ಎಂದರಿದು 
ನೀ ನಿರ್ಲೇಪನು ಆಗಿರು ಪುಣ್ಯ ಪಾಪಗಳ ಅರ್ಪಿಸು ಅವನ ಅಡಿಗೆ//29//
ಐದು ಲಕ್ಷ ಎಂಭತ್ತರ ಒಂಭತ್ತು ಆದ ಸಾವಿರದ ಏಳುನೂರರ ಐದು ರೂಪವ ಧರಿಸಿ 
ಭೋಕ್ತ್ರುಗ ಭೋಜ್ಯನೆಂದೆನಿಸಿ 
ಶ್ರೀಧರಾದುರ್ಗಾರಮಣ ಪಾದಾದಿ ಶಿರ ಪರ್ಯಂತ ವ್ಯಾಪಿಸಿ ಕಾದು ಕೊಂಡಿಹ 
ಸಂತತ ಜಗನ್ನಾಥ ವಿಠಲನು//30//
//ಇತಿ ಶ್ರೀ ಭೋಜನ ಸಂಧಿ ಸಂಪೂರ್ಣಂ//
ಶ್ರೀ ಕೃಷ್ಣಾರ್ಪಣಮಸ್ತು 
 
 
 












.jpg)
.jpg)
.jpg)
.jpg)