Tuesday, November 27, 2012

ವಂದಿಪೆ ನಿನಗೆ ಗಣನಾಥ

ವಂದಿಪೆ ನಿನಗೆ ಗಣನಾಥ


ಮೊದಲ್ವೊಂದಿಪೆ ನಿನಗೆ ಗಣನಾಥ//



ಬಂದ ವಿಘ್ನ ಕಳಿಯೋ ಗಣನಾಥ

ಮೊದಲ್ವೊಂದಿಪೆ ನಿನಗೆ ಗಣನಾಥ//



ಹಿಂದೆ ರಾವಣನು ಮದದಿಂದ ನಿನ್ನ ಪೂಜಿಸದೇ

ಸಂದ ರಣದಲ್ಲಿ ಗಣನಾಥ//



ಮಾಧವನ ಆಜ್ಞೆಯಿಂದ ಧರ್ಮರಾಯ ಪೂಜಿಸಲು

ಸಾಧಿಸಿದ ರಾಜ್ಯ ಗಣನಾಥ//



ಮಂಗಳಮೂರುತಿ ಗುರು ರಂಗ ವಿಠಲನ ಪಾದ

ಹಿಂಗದೆ ಪಾಲಿಸೋ ಗಣನಾಥ//

Thursday, November 22, 2012

ವೀರ ಹನುಮ ಬಹು ಪರಾಕ್ರಮಾ

ವೀರ ಹನುಮ ಬಹು ಪರಾಕ್ರಮಾ


ಸುಜ್ಞಾನವಿತ್ತು ಪಾಲಿಸೆನ್ನ ಜೀವರೋತ್ತಮ//



ರಾಮ ದೂತನೆನೆಸಿಕೊಂಡೆ ನೀ

ರಾಕ್ಷಸರ ವನವನೆಲ್ಲ ಕಿತ್ತು ಬಂದೆ ನೀ

ಜಾನಕಿಗೆ ಮುದ್ರೆ ಇತ್ತು ಜಗತಿಗೆಲ್ಲ ಹರುಷವಿತ್ತು

ಚೂಡಾಮಣಿಯ ರಾಮಗಿತ್ತು ಲೋಕಕೆ ಮುತ್ತೆನಿಸಿಬರುವ//



ಗೋಪಿಸುತನ ಪಾದಪೂಜಿಸಿ

ಗದೆಯ ಧರಿಸಿ ಬಕಾಸುರನ ಸಂಹರಿಸಿದೆ

ದ್ರೌಪದಿಯ ಮೊರೆಯ ಕೇಳಿ ಮತ್ತೆ ಕೀಚಕನ್ನ ಕೊಂದು

ಭೀಮನೆಂಬ ನಾಮ ಧರಿಸಿ ಸಂಗ್ರಾಮ ಧೀರನಾಗಿ ಜಗದಿ//



ಮಧ್ಯಗೆಹನಲ್ಲಿ ಜನಿಸಿ ನೀ

ಬಾಲ್ಯದಲ್ಲಿ ಮತ್ಸರಿಯ ರೂಪಗೊಂಡೆ ನೀ

ಸತ್ಯವತಿಯ ಸುತನ ಭಜಿಸಿ ಸಮ್ಮುಖದಿ ಭಾಷ್ಯ ಮಾಡಿ

ಸಜ್ಜನರ ಪೊರೆವ ಮುದ್ದು ಪುರಂದರ ವಿಠಲನ ದಾಸ//

Monday, November 19, 2012

ವೆಂಕಟರಮಣನೆ ಬಾರೋ ಶೇಷಾಚಲ ವಾಸನೆ ಬಾರೋ

ವೆಂಕಟರಮಣನೆ ಬಾರೋ ಶೇಷಾಚಲ ವಾಸನೆ ಬಾರೋ


ಪಂಕಜನಾಭ ಪರಮಪವಿತ್ರ ಶಂಕರ ಮಿತ್ರನೇ ಬಾರೋ//



ಮುದ್ದು ಮುಖದ ಮಗುವೆ ನಿನಗೆ ಮುದ್ದು ಕೊಡುವೆನು ಬಾರೋ

ನಿರ್ದಯವೆಕೋ ನಿನ್ನೊಳಗೆ ನಾನು ಒಂದಿದ್ದೇನೋ ಬಾರೋ//



ಮಂದರಗಿರಿಯನೆತ್ತಿದಾ ನಂದಮೂರ್ತಿಯೇ ಬಾರೋ

ನಂದಕನಂದ ಗೋವಿಂದ ಮುಕುಂದ ಇಂದಿರಶಯನನೆ ಬಾರೋ//



ಕಾಮನಯ್ಯ ಕರುಣಾಳೊ ಶ್ಯಾಮಲ ವರ್ಣನೆ ಬಾರೋ

ಕೊಮಲಾಂಗ ಶ್ರೀ ಪುರಂದರ ವಿಠಲನೆ ಬಾರೋ||

Thursday, November 15, 2012

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ


ಪಂಕಜ ನೇತ್ರಂ ಪರಮ ಪವಿತ್ರಂ

ಶಂಖ ಚಕ್ರಧರ ಚಿನ್ಮಯ ರೂಪಂ

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ//



ಅಂಬುಜೋದ್ಭವ ವಿನುತಂ ಅಗಣಿತ ಗುಣ ನಾಮಂ

ತುಂಬುರು ನಾರದ ಗಾನ ವಿಲೋಲಂ

ಅಂಬುದಿಶಯನಂ ಆತ್ಮಾಭಿರಾಮಂ

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ//



ಪಾಹಿ ಪಾಂಡವ ಪಕ್ಷಂ ಕೌರವ ಮದಹರಣಂ

ಬಹು ಪರಾಕ್ರಮ ಪೂರ್ಣಂ

ಅಹಲ್ಯ ಶಾಪ ಭಯ ನಿವಾರಣಂ

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ//



ಸಕಲ ವೇದ ವಿಚಾರಂ ಸರ್ವಜೀವನ ಕರಂ

ಮಕರ ಕುಂಡಲಧರ ಮದನ ಗೋಪಾಲಂ

ಭಕ್ತಪೋಷಕ ಶ್ರೀ ಪುರಂದರ ವಿಠಲ೦

ವೆಂಕಟಾಚಲ ನಿಲಯಂ ವೈಕುಂಠ ಪುರವಾಸಂ//

Monday, November 12, 2012

ವಿಜಯ ಕವಚ

ಸ್ಮರಿಸಿ ಬದುಕಿರೋ ದಿವ್ಯ ಚರಣಕೆರಗಿರೋ


ದುರಿತ ತರಿದು ಪೊರೆವ ವಿಜಯ ಗುರುಗಳೆ೦ಬರ//



ದಾಸರಾಯನ ದಯವ ಸೂಸಿ ಪಡೆದನ/

ದೋಷರಹಿತನ ಸಂತೋಷಭರಿತನ//



ಜ್ಞಾನವಂತನ ಬಲು ನಿಧಾನಿ ಶಾಂತನ/

ಮಾನ್ಯವಂತನ ಬಹುವದಾನ್ಯದಾತನ //



ಹರಿಯ ಭಜಿಸುವ ನರಹರಿಯ ಯಜಿಸುವ/

ದುರಿತ ತ್ಯಜಿಸುವ ಜನಕೆ ಹರುಷ ಸುರಿಸುವ//



ಮೋದಭರಿತನ ಪಂಚಭೇದವರಿತನ/

ಸಾಧುಚರಿತನ ಮನೋವಿಷಾದ ಮರೆತನ//



ಇವರ ನಂಬಿದ ಜನಕೆ ಭಾವವಿದೆಂಬುದು/

ಹವನವಾಗದೋ ನಮ್ಮವರ ಮತವಿದು//



ಪಾಪಕೋಟಿಯ ರಾಶಿ ಲೇಪವಾಗದು/

ತಾಪ ಕಳೆವನು ಬಲು ದಯಾಪಯೋನಿಧಿ//



ಪವನ ರೂಪದಿ ಹರಿಯ ಸ್ತವನ ಮಾಡಿದ/

ಭುವನ ಬೇಡಿದ ಮಾಧವನ ನೋಡಿದ//



ರಂಗನೆಂದನ ಭಾವವು ಹಿಂಗಿತೆಂದನ/

ಮಂಗಳಾ೦ಗನ ಅಂತರಂಗವರಿತನ//



ಕಾಶಿನಗರದಲ್ಲಿದ್ದ ವ್ಯಾಸದೇವನ ದಯವ/

ಸೂಸಿ ಪಡೆದನ ಉಲ್ಲಾಸತನದಲಿ//



ಚಿಂತೆ ಬ್ಯಾಡಿರೋ ನಿಶ್ಚಿಂತರಾಗಿರೋ/

ಶಾಂತಗುರುಗಳ ಪಾದವನ್ನು ನಂಬಿರೋ//



ಖೇದವಾಗದೋ ನಿಮಗೆ ಮೋದವಾಹುದೋ/

ಆದಿದೇವನ ಸುಪ್ರಸಾದವಾಹುದೋ//



ತಾಪ ತಡೆವನು ಬಂದ ಪಾಪ ಕಡಿವನು/

ಶ್ರೀಪತಿಯ ಪಾದ ಸಮೀಪವಿಡುವನು//



ವೇದ ಓದಲು ಬರಿದೆ ವಾದ ಮಾಡಲು/

ಹಾದಿ ದೊರೆಯದು ಬುಧರ ಪಾದ ನಂಬದೆ//



ಗಂಗೆ ಮಿಂದರೆ ಮಲವು ಹಿಂಗಿತಲ್ಲದೆ/

ರಂಗನೊಲಿಯನು ಭಕ್ತರ ಸಂಗ ದೊರಕದೆ//



ಲೆಕ್ಕವಿಲ್ಲದ ದೇಶ ತುಕ್ಕಿ ಬಂದರು/

ದುಃಖವಲ್ಲದೆ ಲೇಶ ಭಕ್ತಿ ದೊರಕದು//



ದಾನಮಾಡಲು ದಿವ್ಯ ಗಾನ ಪಾಡಲು/

ಜ್ಞಾನ ದೊರೆಯದೋ ಇವರಧೀನವಾಗದೆ//



ನಿಷ್ಠೆ ಯಾತಕೆ ಕಂಡ ಕಷ್ಟವ್ಯಾತಕೆ/

ದಿಟ್ಟ ಗುರುಗಳ ಪಾದ ಮುಟ್ಟಿ ಭಜಿಸಿರೋ//



ಪೂಜೆ ಮಾಡಲು ಕಂಡ ಗೋಜು ಬೀಳಲು/

ಬೀಜ ಮಾತಿನ ಫಲ ಸಹಜ ದೊರಕದು//



ಸುರರು ಎಲ್ಲರೂ ಇವರ ಕರವ ಪಿಡಿವರೋ/

ತರಳರಂದದಿ ಹಿಂದೆ ತಿರುಗುತಿಪ್ಪರೋ//



ಗ್ರಹಗಳೆಲ್ಲವೂ ಇವರ್ಗೆ ಸಹಾಯ ಮಾಡುತ/

ಅಹೋರಾತ್ರಿಲಿ ಸುಖವ ಕೊಡುವುದು//



ವ್ಯಾಧಿ ಬಾರದೋ ದೇಹ ಭಾದೆ ತಟ್ಟದೋ/

ಆದಿದೇವನ ಸುಪ್ರಸಾದವಾಹುದೋ//



ಪತಿತಪಾಮರ ಮಂದಮತಿಯ ನಾ ಬಲು/

ಸ್ತುತಿಸಲಾಪನೆ ಇವರ ಅತಿಶಯಂಗಳ//



ಕರುಣದಿಂದಲಿ ಎಮ್ಮ ಪೊರೆವನಲ್ಲದೆ/

ದುರಿತಕೋಟಿಯ ಬೇಗ ತರಿವ ದಯದಲಿ//



ಮಂದಮತಿಗಳು ಇವರ ಚಂದವರಿಯದೆ/

ನಿಂದಿಸುವರೋ ಭವದ ಬಂಧ ತಪ್ಪದೋ//



ಇಂದಿರಾಪತಿ ಇವರ ಮುಂದೆ ಕುಣಿವನೋ/

ಅಂದವಚನವ ನಿಜಕೆ ತಂದು ತೋರ್ಪನು//



ಉದಯಕಾಲದಿ ಈ ಪದವ ಪಠಿಸಲು/

ಮದದನಾದರು ಜ್ಞಾನ ಉದಯವಾಹುದೋ//



ಸಟೆಯಿದಲ್ಲವೋ ವ್ಯಾಸ ವಿಠಲ ಬಲ್ಲನೋ/

ಪಠಿಸಬಹುದಿದು ಕೇಳಿ ಕುಟಿಲರಹಿತರು//